ಹುಬ್ಬಳ್ಳಿ: ಕಳೆದ ನವಂಬರ್ ತಿಂಗಳಿನ ಕೊನೆಯಲ್ಲಿ ಸುರಿದ ಮಳೆಗೆ ಸಾಕಷ್ಟು ಬೆಳೆ ಹಾನಿಸಂಭವಿಸಿದೆ. ಹೀಗಾಗಿ
ಧಾರವಾಡ ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದ್ದು, ನವೆಂಬರ್ನಲ್ಲಿ ಉಂಟಾದ ಮಳೆ ಹಾನಿ ಪರಿಶೀಲನೆ ನಡೆಸಲಿದೆ. ಬೆಳೆ, ಮನೆ ಮತ್ತು ರಸ್ತೆ ಹಾನಿಯನ್ನು ವೀಕ್ಷಣೆ ಮಾಡಲಿದೆ.
ಹುಬ್ಬಳ್ಳಿ ಗ್ರಾಮೀಣ, ನವಲಗುಂದ, ಅಣ್ಣಿಗೇರಿ, ಕುಂದಗೋಳ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
ಕೇಂದ್ರ ನೆರೆ ಅಧ್ಯಯನ ತಂಡದ ಪರಿಶೀಲನೆಗೂ ಮುನ್ನ ಧಾರವಾಡ ಡಿಸಿ ನಿತೀಶ್ ಪಾಟೀಲ್ ಹಾಗೂ ವಿವಿಧ ಅಧಿಕಾರಿಗಳು ಹುಬ್ಬಳ್ಳಿ ಸರ್ಕಿಟ್ ಹೌಸ್ ದಲ್ಲಿ ಕೇಂದ್ರ ಅಧ್ಯಯನ ತಂಡದ ಸದಸ್ಯರಾದ ಕೇಂದ್ರ ಸರಕಾರದ ಜಲಶಕ್ತಿ ಮಂತ್ರಾಲಯದ ಗುರುಪ್ರಸಾದ ಜೆ., ಮತ್ತು ಕೇಂದ್ರ ಸರಕಾರದ ಹಣಕಾಸು ಮಂತ್ರಾಲಯದ ಮಹೇಶ ಕುಮಾರ ಅವರಿಗೆ ಜಿಲ್ಲೆಯ ಅತಿವೃಷ್ಠಿ
( ಮಳೆ ಹಾನಿ) ಹಾನಿ ಕುರಿತು ಪೋಟೊ ಗ್ಯಾಲರಿ ಹಾಗೂ ಪ್ರಾತ್ಯಕ್ಷೀಕೆ ಮೂಲಕ ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ., ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಬಿ. ಹಾಗೂ ಕೃಷಿ, ತೋಟಗಾರಿಕೆ, ಮಹಾನಗರಪಾಲಿಕೆ, ನೀರಾವರಿ, ಲೋಕೋಪಯೋಗಿ, ಪಂಚಾಯತ ರಾಜ್ ಇಂಜನಿಯರಿಂಗ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.