Breaking News

ಕಲಘಟಗಿಯ ತಂಬೂರ ಅರಣ್ಯ ಪ್ರದೇಶದಲ್ಲಿ ಆನೆ ದಾಳಿ- ಅರಣ್ಯ ಅಧಿಕಾರಿ ಸೇರಿ ಸಿಬ್ಬಂದಿಗೂ ಗಾಯ

ಧಾರವಾಡ : ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಂಬೂರ ಅರಣ್ಯ ಪ್ರದೇಶದಲ್ಲಿ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಕಾರ್ಯಾಚರಣೆ ವೇಳೆ ಆನೆಗಳು ದಿಢೀರನೆ ದಾಳಿ ಮಾಡಿದ ಘಟನೆ ನಡೆದಿದೆ.


ಹಲವಾರು ದಿನಗಳಿಂದ 8 ಆನೆಗಳ ಹಿಂಡು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಆಲದಕಟ್ಟಿ,ತಂಬೂರ, ಸಂಗಮೇಶ್ವರ ಡಿಂಬವಳ್ಳಿ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಬಿಡು ಬಿಟ್ಟಿದ್ದ ಆನೆಗಳನ್ನು ಅರಣ್ಯ ಅಧಿಕಾರಿಗಳು ನಿರಂತರ ಕಾಡಿಗೆ ಅಟ್ಟಲ್ಲೂ ಕಾರ್ಯಚರಣೆ ಮಾಡುತ್ತಿದ್ದ ವೇಳೆ ಅಧಿಕಾರಿಗಳ ಮೇಲೆ ದಾಳಿ ನಡೆಸಿವೆ.


ಬಮ್ಮಿಗಟ್ಟಿ ವಲಯದ ಅಧಿಕಾರಿ ಉಮ್ಮೆಶ ಕಡಿ, ಮೌನೇಶ ಲಿಂಗನಶೆಟ್ಟಿಕೊಪ್ಪ,ಸುರೇಶ ಅರವಳ್ಳಿ, ಪರಶುರಾಮ, ಕೃಷ್ಣ ಪಮ್ಮಾರ ಅವರಿಗೆ ಆನೆಯು ಕ್ವಾರಿಯಿಂದ ದಾಳಿ ಮಾಡಿದ್ದರಿಂದ ಗಾಯಗೊಂಡಿದ್ದಾರೆ. ಇನ್ನುಳಿದ ಸಿಬ್ಬಂದಿಗಳಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು ಎಲ್ಲ ಸಿಬ್ಬಂದಿಗಳನ್ನ ಸ್ಥಳೀಯ ಸರ್ಕಾರಿ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *