ಹುಬ್ಬಳ್ಳಿ :ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಒಬ್ಬರು ಸಾವಿಗೀಡಾದ ಘಟನೆ ನಿನ್ನೆ ರಾತ್ರಿ ನೆಡೆದಿದೆ.
ರಂಗರಾಜು ಎಸ್ ಎ (59) ಸಾವಿಗೀಡಾದ ಇಂಜಿನೀಯರ್ ಆಗಿದ್ದು, ನಿನ್ನೆ ರಾತ್ರಿ 11.30 ರ ಸುಮಾರಿಗೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಬಿದ್ದು ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿ-ಬೆಂಗಳೂರು ರೈಲಿಗೆ ಹತ್ತಬೇಕಿತ್ತು,ಆದರೆ ಬೆಳಗಾವಿ ಬೆಂಗಳೂರು ರೈಲಿಗೆ ಹತ್ತಿದ್ದರೂ ಈ ವೇಳೆ ಬೇರೆ ರೈಲಿಗೆ ಹತ್ತಿದ್ದ ವಿಷಯ ತಿಳಿದು ಚಲಿಸುತ್ತಿದ್ದ ರೈಲು ಇಳಿಯುವಾಗ ಪ್ಲಾಟ್ ಫಾರಂ ನಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಬಿಬಿಎಂಪಿ ಕೆ.ಆರ್ ಐಡಿ ಎಲ್ ವಿಭಾಗದಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

