ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವಂತ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಕಾಂಗ್ರೆಸ್ ನಿಂದ ಭೂಹಗರಣದ ಆರೋಪ ಹೊತ್ತಿರುವಂತ ಸಚಿವ ಬೈರತಿ ಬಸವರಾಜ ರಾಜೀನಾಮೆ ಒತ್ತಾಯಿಸಲಾಗಿತ್ತು. ಇದರ ನಡುವೆಯೂ ಇಂದು ರಾಜ್ಯ ಹೈಕೋರ್ಟ್ ಪ್ರಕರಣ ಸಂಬಂಧ ಸಚಿವ ಬೈರತಿ ಬಸವರಾಜ್ ಗೆ ನೀಡಿರುವಂತ ಸಮನ್ಸ್ ಗೆ ತಡೆಯಾಜ್ಞೆ ನೀಡಿದೆ.
ಈ ಮೂಲಕ ಭೈರತಿ ಬಸವರಾಜ್ ಗೆ ಬಿಗ್ ರಿಲೀಫ್ ನೀಡಿದೆ.