ಧಾರವಾಡ: ಧಾರವಾಡದ ಕೆಲಗೇರಿ ಕೆರೆಗೆ ಹಾರಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಧಾರವಾಡ ಸಂತೋಷನಗರದ ನಿವಾಸಿ ಅನಿತಾ ಹೆಗಡೆ ಎಂಬುವವರೇ ಸಾವನ್ನಪ್ಪಿದವರು. ಅನಿತಾ ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಅಲ್ಲದೇ ಹಲವು ದಿನಗಳಿಂದ ಧಾರವಾಡದ ಡಿಮಾನ್ಸ್ನಲ್ಲಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು.
ಇಂದು ಬೆಳಗಿನಜಾವ ಏಕಾಏಕಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

