ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಇಂದು ಪರಿಹಾರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಜನ ಬಸ್ಗಳ ಮೂಲಕ ಗುಂಪು, ಗುಂಪಾಗಿ ಆಗಮಿಸಿದ್ದು, ಕೊರೊನಾ ನಿಯಮವನ್ನು ಉಲ್ಲಂಘನೆ ಮಾಡಲಾಗಿದೆ.

ಬಸವಗುಡಿ ಮೈದಾನದಲ್ಲಿ ಇಂದು ಬೆಳಗ್ಗೆ 11:30ಕ್ಕೆ ಸರ್ಕಾರ ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ನೂರಾರು ಮಂದಿ ಬಸ್ ಏರಿ ಬಂದಿದ್ದರು. ಅಲ್ಲದೇ ಈ ವೇಳೆ ಎಲ್ಲರೂ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಕೊರೊನಾ ನಿಯಮವನ್ನು ಉಲ್ಲಂಘಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

