ಹುಬ್ಬಳ್ಳಿ: ನಗರದ ಖಾಸಗಿ ಹೊಟೇಲನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿಯಲ್ಲಿ ದೀನದಯಾಳಜಿ ಅವರ ಚಿಂತನೆ, ಮೋದಿಯವರ ಸಾಧನೆ ಹಾಗೂ ಬಿಜೆಪಿ ಸಾಧನೆಯ ಕುರಿತು ಕಲಾವಿದರ ಕುಂಚದಿಂದ ಅರಳಿದ ಚಿತ್ರ ಪ್ರದರ್ಶಿನಿ ಏರ್ಪಡಿಸಲಾಗಿತ್ತು..
ಬಿಜೆಪಿ ಸಾಧನೆ ಹಾಗೂ ನಾಯಕರ ಚಿತ್ರ ಪ್ರದರ್ಶನಕ್ಕೆ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹಾಗೂ ನಳೀನ್ ಕುಮಾರ್ ಕಟೀಲು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಗೋವಿಂದ್ ಕಾರಜೋಳ, ಜಗದೀಶ್ ಶೆಟ್ಟರ್, ಡಿ.ಕೆ.ಅರುಣಾ, ಮಹೇಶ ತೆಂಗಿನಕಾಯಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.