ಬೆಂಗಳೂರು: ಮಕ್ಕಳು ಹಾಗೂ ವಯೋ ವೃದ್ಧರ ಆರೋಗ್ಯ ವಿಚಾರದಲ್ಲಿ ಯಾವುದೇ ಅವಕಾಶಗಳನ್ನು ತೆಗೆದುಕೊಳ್ಳದಿರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ವಯಸ್ಕರು ಮತ್ತು ಅರ್ಹ ಫಲಾನುಭವಿಗಳನ್ನು ಲಸಿಕಾ ಕೇಂದ್ರಗಳತ್ತ ಸೆಳೆಯಲು ಯೋಜನೆಗಳನ್ನು ರೂಪಿಸುತ್ತಿದೆ.
ಮಕ್ಕಳಿಕೆ ಲಸಿಕೆ ನೀಡುವುದರ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮಕ್ಕಳು ಲಸಿಕೆ ಪಡೆದುಕೊಳ್ಳುವುದೇ ಇರುವುದನ್ನು ತಪ್ಪಿಸಲು 15-18 ವರ್ಷದ ಮಕ್ಕಳಿಗೆ ಶಾಲೆ ಹಾಗೂ ಕಾಲೇಜುಗಳಲ್ಲಿಯೇ ಲಸಿಕೆ ನೀಡುವ ಕೆಲಸವನ್ನು ಮಾಡಲಾಗುತ್ತಿದೆ. ಈ ಕುರಿತು ಶಿಕ್ಷಣ ಇಲಾಖೆ, ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಮಾತನಾಡಿ, ಉದ್ದೇಶಿತ ಜನಸಂಖ್ಯೆಯ ಜನರನ್ನು ಆರಂಭದಲ್ಲಿ ಲಸಿಕೆ ಕೇಂದ್ರಗಳಿಗೆ ಕರೆಯಲಾಗುತ್ತದೆ. ಈ ವಯೋಮಾನದ ಜನರು ಮತ್ತು ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರ ಮಾಹಿತಿಗಳು ನಮ್ಮ ಬಳಿಯಿದೆ. ಲಸಿಕೆ ಕೇಂದ್ರಗಳ ಹೊರತಾಗಿ ಫಲಾನುಭವಿಗಳ ವಯಸ್ಸು ಮತ್ತು ರೋಗಗಳ ಆಧಾರದ ಮೇಲೆ ಬೂಸ್ಟರ್ ಡೋಸ್ಗಳನ್ನು ಅವರ ಮನೆ ಬಾಗಿಲಿಗೇ ತೆರಳಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

