Breaking News

ಹು-ಧಾ ಮೇಯರ್‌ ಆಯ್ಕೆ ಬಗ್ಗೆ ತಿರ್ಮಾನ ತೆಗೆದುಕೊಳ್ತೀವಿ-ಶಂಕರ ಪಾಟೀಲ್‌ ಮುನೇನಕೊಪ್ಪ

ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಮೇಯರ್ ಆಯ್ಕೆ ಬಗ್ಗೆ ಶೀಘ್ರದಲ್ಲಿಯೇ ಸರಕಾರದಿಂದ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಹೇಳಿದರು.

ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯ ನಂತರ ಮಾತನಾಡಿದ ಸಚಿವರು, ಅವಳಿನಗರದ ಅಭಿವೃದ್ಧಿಗೆ ತಾವು ಸದಾಕಾಲ ಮುಂದು. ಚುನಾವಣೆಗಳು ಇದ್ದಿದ್ದರಿಂದ ತಡವಾಗಿದೆಯಷ್ಟೇ ಎಂದು ಹೇಳಿದರು.

ಅವಳಿನಗರದ ಅಭಿವೃದ್ಧಿಗೆ ಪೂರಕವಾದ ಎಲ್ಲವನ್ನೂ ಮಾಡಲು ಸಿದ್ಧವಾಗಿದ್ದು, ಸ್ಮಾರ್ಟ್ ಸಿಟಿ ಕೆಲಸಕ್ಕೂ ತೀವ್ರತೆ ಕೊಡಲಾಗುವುದೆಂದು ಮುನೇನಕೊಪ್ಪ ಹೇಳಿದರು.

ಕಸದ ವಿಲೇವಾರಿ ಬಗ್ಗೆ ಒಂದು ಪ್ರದೇಶಕ್ಕೆ ಸಿಮೀತವಾಗಿ ಕೆಲಸ ಮಾಡುವುದಿಲ್ಲ. ಅವಳಿನಗರ ಎಲ್ಲ ಭಾಗದಲ್ಲೂ ಸ್ವಚ್ಛತೆಗೆ ಪ್ರಾಮುಖ್ಯತೆ ಕೊಡಲಾಗುವುದೆಂದು ಸಚಿವರು ಹೇಳಿದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *