Breaking News

ಐದು ಜಿಲ್ಲೆಗಳ ಡಿಸಿಗಳಿಗೆ ಬೆವರಿಳಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಫುಲ್‌ ಕ್ಲಾಸ್‌ ಮಾಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಸರ್ಕಾರದ ಕಾರ್ಯಕ್ರಮ ಅನುಷ್ಠಾನದಲ್ಲಿ ವೈಫಲ್ಯ, ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಹಿನ್ನಡೆ ವಿಚಾರವನ್ನು ಪ್ರಸ್ತಾಪಿಸಿ ಐವರು ಜಿಲ್ಲಾಧಿಕಾರಿಗಳಿಗೆ ಕ್ಲಾಸ್‌ ಮಾಡಿದ್ದಾರೆ. ಚಿಕ್ಕಮಗಳೂರು, ಬೆಳಗಾವಿ, ಮೈಸೂರು, ವಿಜಯನಗರ, ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಬೊಮ್ಮಾಯಿ ವಾರ್ನಿಂಗ್‌ ನೀಡಿದ್ದಾರೆ. ಚಿಕ್ಕಬಳ್ಳಾಪುರ,ಮಂಡ್ಯ ಸೇರಿ ಏಳು ಜಿಲ್ಲೆಗಳಲ್ಲಿ ಅರ್ಧಕರ್ಧ ಕೆಲಸ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸಚಿವಾರದ ಆರ್‌.ಅಶೋಕ್‌, ಗೋವಿಂದ ಕಾರಜೋಳ, ಸಿಸಿ ಪಾಟೀಲ್‌, ಹಾಲಪ್ಪ ಆಚಾರ್‌, ಅಂಗಾರ, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *