ಬೆಂಗಳೂರು : ವರ್ಷದ ಕೊನೆ ದಿನ ಪೊಲೀಸ್ ಇಲಾಖೆಯಲ್ಲಿ ಭಾರೀ ಬದಲಾವಣೆಯಾಗಲಿದೆ ಎನ್ನುವುದು ಖಚಿತವಾಗಿದೆ. ಆಡಳಿತಯಂತ್ರದಲ್ಲಿ ಬದಲಾವಣೆ ತರಲು ಸಿಎಂ ತೀರ್ಮಾನ ಮಾಡಿದ್ದಾರೆ.

ಕನ್ನಡಿಗ ಐಪಿಎಸ್ ಅಧಿಕಾರಿಗೆ ಒಲಿದ ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆ ಒಲಿಯುವುದು ಪಕ್ಕಾ ಆಗಿದೆ. ಬಿ.ದಯಾನಂದ್ ಹೆಸರು ಬೆಂಗಳೂರು ಪೊಲೀಸ್ ಆಯುಕ್ತರ ಹುದ್ದೆಗೆ ಬಹುತೇಕ ಫೈನಲ್ ಆಗಿದ್ದು, ಅಧಿಕೃತ ಆದೇಶ ಹೊರ ಬೀಳುವುದಷ್ಟೇ ಬಾಕಿ ಇದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ಬಿ.ದಯಾನಂದ್ ಸದ್ಯ ಗುಪ್ತಚರ ಇಲಾಖೆ ಎಡಿಜಿಪಿ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕಮಿಷನರ್ ಹುದ್ದೆಗೆ ಎಡಿಜಿಪಿ ದರ್ಜೆ ಅಧಿಕಾರಿಗಳಲ್ಲಿ ಭಾರೀ ಪೈಪೋಟಿ ನಡೆಯುತ್ತಿದೆ. ಉಮೇಶ್ ಕುಮಾರ್, ಅಲೋಕ್ ಕುಮಾರ್ , ಬಿ ದಯಾನಂದ್ ನಡುವೆ ಪೈಪೋಟಿ ಇದೆ. ರೋಕ್ಷವಾಗಿ ಸಿಎಂ ಬೊಮ್ಮಾಯಿ ಮೇಲೆಯೂ ಅಧಿಕಾರಿಗಳು ಒತ್ತಡ ತಂದಿದ್ದಾರೆ. ಸಂಘಪರಿವಾರದ ಮೂಲಕ ಸಿಎಂ ಮೇಲೆ ಒತ್ತಡ ಹಾಕಿಸಿದ್ದಾರೆ ಎನ್ನುವ ವದಂತಿಯೂ ಜೋರಾಗಿ ಹಬ್ಬಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





