Breaking News

ಹುಬ್ಬಳ್ಳಿಯ ರಾಯನಾಳ ಬಳಿ ಕಾರು ಪಲ್ಟಿ- ಓರ್ವನ ಸಾವು, ನಾಲ್ವರಿಗೆ ಗಂಭೀರ ಗಾಯ

ಹುಬ್ಬಳ್ಳಿ : ವೇಗವಾಗಿ ಹೋಗುತ್ತಿದ್ದ ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ರಾಯನಾಳ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿ ಒಟ್ಟು ಐದು ಜನರಿದ್ದು, ಅದರಲ್ಲಿದ್ದ ಓರ್ವ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಉಳಿದ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನೆ ಮಾಡಲಾಗಿದೆ. ಕಾರು ಲಕ್ಷ್ಮೀಕಾಂತ ಕಾಟವಾಟೆ ಎನ್ನುವವರ ಹೆಸರಿನಲ್ಲಿದೆ.

ಮೃತ ಯುವಕನನ್ನ ಹುಬ್ಬಳ್ಳಿ ಮಹಾವೀರಗಲ್ಲಿಯ ಗಣೇಶ ಬಂಡಿ ಎಂದು ಗುರುತಿಸಲಾಗಿದ್ದು, ಗಾಯಾಳುಗಳ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಕಾನೂನು ಕ್ರಮವನ್ನ ಜರುಗಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *