Breaking News

15-18ನೇ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನಕ್ಕೆ ಸಿಎಂ ಚಾಲನೆ

ಬೆಂಗಳೂರು: ಇಲ್ಲಿಯ ಗೋವಿಂದರಾಜನಗರದ ಮೂಡಲಪಾಳ್ಯದಲ್ಲಿ ಬಿಬಿಎಂಪಿ ಪ್ರೌಢಶಾಲೆಯಲ್ಲಿ
ಹಮ್ಮಿಕೊಳ್ಳಲಾಗಿದ್ದ 15-18ನೇ ವಯೋಮಾನದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಕ್ಕಳನ್ನು ನೋಡಿ ಸಂತೋಷವಾಯಿತು. ಬೆಂಗಳೂರಿನ ಪ್ರದೇಶದಲ್ಲಿ ಇಂತಹ ವ್ಯವಸ್ಥಿತ ಶಾಲೆ ಇದೆ ಎನ್ನುವುದನ್ನು ಸೋಮಣ್ಣ ತೋರಿಸಿದ್ದಾರೆ. ಈ ಲಸಿಕೆ ಕಾರ್ಯಕ್ರಮ ಹೊಸ ವರ್ಷದಲ್ಲಿ ನಡೆಯುತ್ತಿದೆ. ಹೊಸವರ್ಷದಂದು ಹೊಸ ಅಭಿಯಾನ ನಡೆಯುತ್ತಿದೆ. ಮೋದಿಜಿಯವರ ದೂರದೃಷ್ಟಿಯ ಪರಿಣಾಮದಿಂದ ಈ ಕಾರ್ಯಕ್ರಮ ನಡೆಯುತ್ತಿದೆ ಎಂದರು.

ವಸತಿ ಸಚಿವ ಸೋಮಣ್ಣ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ.ಅಶ್ವಥ ನಾರಾಯಣ, ಆರೋಗ್ಯ ಸಚಿವ ಕೆ ಸುಧಾಕರ್, ಬೈರತಿ ಬಸವರಾಜು, ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *