Breaking News

ದೇವಸ್ಥಾನ ಪ್ರಸಾದಕ್ಕೆ ಹೊಸ ನಿಯಮ ಜಾರಿ

ಉಡುಪಿ: ಕೇಂದ್ರ ಸರಕಾರ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ವತಿಯಿಂದ ಧಾರ್ಮಿಕ ಕೇಂದ್ರ ಗಳಲ್ಲಿ ದೊರೆಯುವ ಪ್ರಸಾದದ ಗುಣಮಟ್ಟ ಪರಿಶೀಲನೆಗೆ “ಭೋಗ್‌’ ಕಾರ್ಯಕ್ರಮ ಅನು ಷ್ಠಾನಗೊಳಿಸಿದ್ದು, ಕರಾವಳಿಯ 4 ದೇವಸ್ಥಾನಗಳಲ್ಲಿ ಶೀಘ್ರವೇ ಕಾರ್ಯರೂಪಕ್ಕೆ ಬರಲಿದೆ.

ಈ ಮೂಲಕ ಭಕ್ತರಿಗೆ ಉತ್ತಮ ಗುಣಮಟ್ಟ ಖಾತರಿಪಡಿಸಿದ ಪ್ರಸಾದವನ್ನು ನೀಡುವ ಉದ್ದೇಶವನ್ನು ಸರಕಾರ ಹೊಂದಿದೆ. ಪ್ರಾರಂಭಿಕ ಹಂತದಲ್ಲಿ ಕರಾವಳಿಯ ನಾಲ್ಕು ದೇವಸ್ಥಾನಗಳನ್ನು ಆಯ್ಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು ಹೆಚ್ಚಿಸುವ ನಿರೀಕ್ಷೆ ಹೊಂದಲಾಗಿದೆ. ಪ್ರಸಾದಗಳಲ್ಲಿ ಯಾವ ಉತ್ಪನ್ನಗಳನ್ನು ಎಷ್ಟು ಪ್ರಮಾಣದಲ್ಲಿ ಬಳಕೆ ಮಾಡಬೇಕು. ಅದರ ಶೇಖರಣೆ ಹೇಗೆ? ಯಾವ ವಸ್ತುಗಳನ್ನು ಬಳಸಬಾರದು ಎಂಬ ಅಂಶಗಳನ್ನು ಇದರ ಸದಸ್ಯರು ಗಮನಿಸಲಿದ್ದಾರೆ.

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *