Breaking News

ಭಾರಿ ಮೊತ್ತದ ವಿವಿ ಕ್ಯಾಂಪಸ್ ಸ್ಥಾಪನೆ


ಬೆಂಗಳೂರು:ನೂರು ಎಕರೆ ವಿಸ್ತಾರದಲ್ಲಿ 320 ಕೋಟಿ ವೆಚ್ಚದಲ್ಲಿ ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ ತಲೆ ಎತ್ತಲಿದೆ .ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ   ನಿರ್ಮಾಣ ಗೊಳ್ಳಲಿದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸುತ್ತಾರೆ.

ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿಯಲ್ಲಿ ಈ ವಿವಿ ಕ್ಯಾಂಪಸ್ ಸ್ಥಾಪನೆಯಾಗಲಿದೆ. ವೇದ, ವಿಜ್ಞಾನ, ಗಣಿತ ಹಾಗೂ ವಿಜ್ಞಾನ ತಂತ್ರಜ್ಞಾನಕ್ಕೆ ಸಂಸ್ಕೃತ ಭಾಷೆಯ ಕೊಡುಗೆ ಅನನ್ಯ. ಇದರ ಕುರಿತು ಜಗತ್ತಿನ ವಿವಿಧ ಮೂಲೆಗಳಿಂದ ಅಧ್ಯಯನ ಮಾಡಲು ಭಾರತಕ್ಕೆ ಸಾವಿರಾರು ವಿದ್ಯಾರ್ಥಿಗಳು ಬರುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಸಂಸ್ಕೃತ ಭಾಷೆಯ ಜೊತೆಗೆ ಆಧುನಿಕ ಶಿಕ್ಷಣ ಪಡೆಯುವಂತಹ ಕೇಂದ್ರಗಳನ್ನು ಇದೇ ವಿವಿಯ ಅಡಿಯಲ್ಲಿ ಪ್ರಾರಂಭಿಸಲಾಗುತ್ತಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *