ಒಂದು ವರ್ಷದಲ್ಲಿ ತಾನು ಟೀಂ ಇಂಡಿಯಾ ಟೆಸ್ಟ್ ತಂಡವನ್ನ ಮುನ್ನಡೆಸಲಿದ್ದಾರೆ. ಒಂದು ವರ್ಷದ ಹಿಂದೆ ಟೀಂ ಇಂಡಿಯಾ ಟೆಸ್ಟ್ ಸ್ಕ್ವಾಡ್ನಲ್ಲಿ ಸ್ಥಾನ ಪಡೆಯುವಲ್ಲಿ ಹಿಂದೆ ಬಿದ್ದಿದ್ದ ಓಪನರ್ ಕೆ.ಎಲ್ ರಾಹುಲ್. ಅಂತದ್ರಲ್ಲಿ ಜೋಹಾನ್ಸ್ಬರ್ಗ್ನಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಭಾರತ ತಂಡವನ್ನ ಮುನ್ನೆಡೆಸುತ್ತಿದ್ದಾರೆ.
ಪಂದ್ಯ ಶುರುವಾಗುವ ಕೆಲ ಕ್ಷಣದಲ್ಲಿ ವಿರಾಟ್ ಕೊಹ್ಲಿ ಗಾಯಾಳು ಎಂದು ಘೋಷಣೆಯಾಗಿದ್ದು, ಕೆ.ಎಲ್ ರಾಹುಲ್ ಟೀಂ ಇಂಡಿಯಾವನ್ನ ಮುನ್ನಡೆಸಿದ್ದಾರೆ. ದುರದೃಷ್ಟವಶಾತ್ ವಿರಾಟ್ಗೆ ಬೆನ್ನುಮೂಳೆಯ ನೋವಿನ ಸೆಳೆತದಿಂದ ಬಳಲುತ್ತಿದ್ದು, ಫಿಸಿಯೋಗಳು ಕೊಹ್ಲಿ ಚೇತರಿಕೆಗೆ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಇಂದು 99ನೇ ಟೆಸ್ಟ್ ಪಂದ್ಯವನ್ನಾಡಬೇಕಿದ್ದ ವಿರಾಟ್, ಕಣದಿಂದ ಹೊರಗುಳಿದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

