ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಟೆಸ್ಟ್ಗಳ ಸರಣಿಯ ಎರಡನೇ ಪಂದ್ಯ ಇಂದಿನಿಂದ ಜೋಹಾನ್ಸ್ಬರ್ಗ್ನಲ್ಲಿ ನಡೆಯಲಿದೆ.
ಆದರೆ ಅದಕ್ಕೂ ಮುನ್ನ ಈ ಸುದ್ದಿ ಭಾರತಕ್ಕೆ ಆಘಾತ ತಂದಿದೆ. ವಿರಾಟ್ ಕೊಹ್ಲಿ ಎರಡನೇ ಟೆಸ್ಟ್ನಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಕೆಎಲ್ ರಾಹುಲ್ ನಾಯಕತ್ವ ವಹಿಸಲಿದ್ದಾರೆ. ಇದಕ್ಕೂ ಮುನ್ನ ಸೆಂಚುರಿಯನ್ನಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ ಭಾರತ ಜಯ ಸಾಧಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಅಂತಹ ಪರಿಸ್ಥಿತಿಯಲ್ಲಿ, ಅವರು ಜೋಹಾನ್ಸ್ಬರ್ಗ್ನಲ್ಲಿ ಗೆಲುವು ದಾಖಲಿಸಿದರೆ, ಅಜೇಯ 2-0 ಮುನ್ನಡೆ ಮೂಲಕ ಸರಣಿಯನ್ನೂ ತಮ್ಮದಾಗಿಸಿಕೊಳ್ಳಲಿದ್ದಾರೆ. ಆದರೆ, ಭಾರತದ ಈ ಯೋಜನೆಯನ್ನು ವಿಫಲಗೊಳಿಸಲು ದಕ್ಷಿಣ ಆಫ್ರಿಕಾ ತಂಡ ಪ್ರಯತ್ನಿಸಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

