Breaking News

ಡಿಕೆ ಬ್ರದರ್ಸ್ ವಿರುದ್ಧ ಕುಮಾರಸ್ವಾಮಿ ಕಿಡಿ



ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಡುವಿನ ಮಾತಿನ ಸಮರ ಮುಂದುವರಿದಿದೆ. ಇಂದು ಮಾಜಿ ಸಿಎಂ ಎಚ್ ಡಿಕೆ ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್ ಮಾಡಿದ್ದು, “ಸಹೋದರರ ಆಟದ ಅಂತ್ಯ ಹತ್ತಿರ ಬಂದಿದೆ” ಎಂದಿದ್ದಾರೆ.

“ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಅಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ? ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ” ಎಂದು ಎಚ್ ಡಿಕೆ ಕುಟುಕಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *