Breaking News

ರಾಮನಗರ ಘಟನೆ : ಗೂಂಡಾ ಕಾಂಗ್ರೆಸ್ ಗೂಂಡಾ

ಧಾರವಾಡ:ರಾಮನಗರದಲ್ಲಿ ನಡೆದ ರಾಜಕೀಯ ಬೆಳವಣಿಗೆ , ಕಾಂಗ್ರೆಸ್ಸ್ ನ ಡಿ ಕೆ.ಸಿ ಸಹೋದರರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರನ್ನು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಹು – ಧಾ ಮಹಾನಗರ ಜಿಲ್ಲಾ ವತಿಯಿಂದ ಹು- ಧಾ ಪಶ್ಚಿಮ -74 , ಹಾಗು ಧಾರವಾಡ 71 ರ ಸಹಯೋಗದಲ್ಲಿ ಇಂದು ಧಾರವಾಡದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ಅರ್ಪಿಸಿದರು.

ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 2 ಪ್ರತಿಮೆಗಳ ಲೋಕಾರ್ಪಣೆ ಕಾರ್ಯಕ್ರಮ ಸಂದರ್ಭದಲ್ಲಿ ಸ್ಥಳೀಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ ಕೆ ಸುರೇಶ್ ಅವರು ಏಕಾಏಕಿ ತಮ್ಮ ಪಟಾಲಂನೊಂದಿಗೆ ಗೂಂಡಾ ಕಾಂಗ್ರೆಸ್ ಗೂಂಡಾ ಕಾರ್ಯಕರ್ತರೊಂದಿಗೆ ವೇದಿಕೆಗೆ ನುಗ್ಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ತೊಡೆತಟ್ಟಿ , ರೌಡಿ ಗೂಂಡಾ ರೀತಿಯಲ್ಲಿ ನುಗ್ಗಿ ಅಸಭ್ಯವಾಗಿ ವರ್ತಿಸಿದ್ದು ಅಕ್ಷಮ್ಮೆ ಅಪರಾಧವಾಗಿದೆ ಎಂದು ಪ್ರತಿಭಟನೆಕಾರರು ದೂರಿದ್ದಾರೆ.

ಪ್ರತಿಭಟನೆಯಲ್ಲಿ ಹು-ಧಾ ಮಹಾನಗರ ಪಾಲಿಕೆ ಸದಸ್ಯರಾದ ಶಿವು ಹಿರೇಮಠ, ಪವನ್ ಥಿಟೆ, ವಿಜಯ್ ಸಾಬಳೆ , ವಿಶ್ವೇಶ್ವರಿ ಅಳಗವಾಡಿ, ಪುಪ್ಪಾ ನವಲಗುಂದ, ರೇಣುಕಾ ಕೋಳೆಕರ, ಮಾಲತಿ ಹುಲಕಟ್ಟಿ,ಶೂಭಾ ಭುಜಂಗನವರ. ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

Share News

About admin

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *