ಕೊರೋನಾ ಕುರಿತು ಇಂದು ಮಹತ್ವದ ಸಭೆಯನ್ನು ಕರೆಯಲಾಗಿತ್ತು. ಮಹತ್ವದ ನಿರ್ಧಾರಗಳನ್ನು ಸಹ ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದರು.
ಬೆಂಗಳೂರಿನಲ್ಲಿ 2 ಡೋಸ್ ಲಸಿಕೆ ಕಡ್ಡಾಯಕ್ಕೆ ಸಲಹೆ ಸಾಧ್ಯತೆ ಇದೆ. ದೇವಸ್ಥಾನ, ಬಸ್, ಮೆಟ್ರೋ, ಆಟೋ, ಓಲಾ, ಉಬರ್, ಸೂಪರ್ಮಾರ್ಕೆಟ್ ಎಂಟ್ರಿಗೆ ಲಸಿಕೆ ಕಡ್ಡಾಯಗೊಳಿಸಲು ಸಲಹೆ ನೀಡಬಹುದು. ಬಿಬಿಎಂಪಿ ಈ ಬಗ್ಗೆ ಇಂದಿನ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

