ಬೆಂಗಳೂರು: ನಗರದಲ್ಲಿ ಮುಂದಿನ ಎರಡುವಾರಗಳ ಕಾಲ 10 ಮತ್ತು 12ನೇ ತರಗತಿ ಹೊರತುಪಡಿಸಿ ಎಲ್ಲಾ ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕ ಸ್ಥಗಳಾದಂತ ಚಿತ್ರಮಂದಿರ, ಮಾಲ್, ಪಬ್, ಬಾರ್ ಗಳಲ್ಲಿ ಶೇ.50ರ ಮಿತಿಯನ್ನು ಏರಲಾಗಿದೆ.
,ವಾರಾಂತ್ರ ಕರ್ಪ್ಯೂ ಜಾರಿಗೊಳಿಸಲಾಗಿದೆ. ನೈಟ್ ಕರ್ಪ್ಯೂ ಮುಂದಿನ ಎರಡು ವಾರ ಮುಂದುವರೆಸಲಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು.
ಇಂದಿನ ಸಿಎಂ ಸಭೆಯ ಬಳಿಕ ಮಾತನಾಡಿದಂತ ಕಂದಾಯ ಸಚಿವ ಆರ್ ಅಶೋಕ್ ಅವರು, ಸಿಎಂ ನೇತೃತ್ವದಲ್ಲಿ ಕೋವಿಡ್ ಸಭೆಯನ್ನು ಮಾಡಲಾಯಿತು. ತಜ್ಞರು ಸಭೆಯಲ್ಲಿ ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

