Breaking News

ಪಂಜಾಬ್ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಕಿಡಿ



ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪಂಜಾಬ್ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾಗಿರುವ ಭದ್ರತಾ ಲೋಪಕ್ಕೆ ಬಿಜೆಪಿ ನಾಯಕರು ವ್ಯಾಪಕ ಆಕ್ರೋಶ ಹೊರ ಹಾಕಿದ್ದು, ಪಂಜಾಬ್ ಕಾಂಗ್ರೆಸ್ ಸರಕಾರದ ವಿರುದ್ಧ ಹಲವರು ಕಿಡಿ ಕಾರಿದ್ದಾರೆ.

”ಪ್ರಧಾನಿ ನರೇಂದ್ರ ಮೋದಿಜೀ ಅವರು ಇಂದು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾಗಿರುವ ಭದ್ರತಾ ಲೋಪವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ನಡೆಯಬಾರದು. ಇದೇ ಸಂದರ್ಭದಲ್ಲಿ ಇದು ಒಂದು ಸಹಜ ಘಟನೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಣಜೀತ್ ಸಿಂಗ್ ಚೆನ್ನಿ ಅವರು ನೀಡಿರುವ ಬೇಜವಾಬ್ದಾರಿ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *