ಭದ್ರತೆಯಲ್ಲಿ ಉಂಟಾದ ಲೋಪ. ಭಟಿಂಡಾ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಪ್ರಧಾನಿ ನರೇಂದ್ರ ಮೋದಿ ಫಿರೋಜ್ಪುರಕ್ಕೆ ಹೊರಟಿದ್ದರು. ಆದರೆ ಮಾರ್ಗ ಮಧ್ಯೆ ಆ ರಸ್ತೆಯನ್ನು ಕೆಲವು ಪ್ರತಿಭಟನಾಕಾರರು ತಡೆದ ಕಾರಣ, ಪ್ರಧಾನಿ ಮೋದಿ ಅವರಿದ್ದ ವಾಹನ ಮತ್ತು ಬೆಂಗಾವಲು ವಾಹನಗಳೆಲ್ಲ ಫ್ಲೈಓವರ್ ಮೇಲೆ 15-20ನಿಮಿಷ ನಿಲ್ಲುವಂತಾಯ್ತು. ಬಳಿಕ ಫಿರೋಜ್ಪುರ ರ್ಯಾಲಿಯನ್ನು ರದ್ದುಗೊಳಿಸಿ ಪ್ರಧಾನಿ ನರೇಂದ್ರ ಮೋದಿ ವಾಪಸ್ ಬಂದಿದ್ದಾರೆ.
ಪಂಜಾಬ್ನ ಫಿರೋಜ್ಪುರದಲ್ಲಿ ಆಯೋಜಿಸಲ್ಪಟ್ಟಿದ್ದ ಪ್ರಧಾನಿ ನರೇಂದ್ರ ಮೋದಿ ಯವರ ರ್ಯಾಲಿ ಕೊನೇ ಕ್ಷಣದಲ್ಲಿ ರದ್ದಾಗಿದೆ.
ದೆಹಲಿಗೆ ವಾಪಸ್ ಆಗಲು ಭಟಿಂಡಾ ವಿಮಾನ ನಿಲ್ದಾಣಕ್ಕೆ ಹಿಂದಿರುಗಿದ ಪ್ರಧಾನಿ ಮೋದಿ, ಕೋಪಗೊಂಡಿದ್ದು ಕಾಣುತ್ತಿತ್ತು ಎಂದು ಮೂಲಗಳು ತಿಳಿಸಿವೆ. ಹಾಗೇ, ಅಲ್ಲಿ ಭದ್ರತೆ ಒದಗಿಸುವ ಸಲುವಾಗಿ ಇದ್ದ ಪಂಜಾಬ್ ರಾಜ್ಯ ರಕ್ಷಣಾ ಅಧಿಕಾರಿಗಳಿಗೆ, ‘ನಿಮ್ಮ ಮುಖ್ಯಮಂತ್ರಿಗೆ ನನ್ನ ಧನ್ಯವಾದ ತಿಳಿಸಿ, ಕೊನೆಪಕ್ಷ ನಾನು ಭಟಿಂಡಾ ವಿಮಾನ ನಿಲ್ದಾಣದವರೆಗೆ ಜೀವಂತವಾಗಿಯಾದರೂ ಬರುವಂತೆ ಮಾಡಿದರು’ ಎಂದು ಹೇಳಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

