Breaking News

ಪರಿಹಾರ ಪ್ಯಾಕೇಜ್ ಘೋಷಿಸಬೇಕು : ಮಲ್ಲಿಕಾರ್ಜುನ ಖರ್ಗೆ ಒತ್ತಾಯ



ಕಲಬುರಗಿ: ಕೊರೊನಾ ಕಾರಣಕ್ಕಾಗಿ ಲಾಕ್‌ಡೌನ್‌ ಮಾಡುವ ಬಗ್ಗೆ ಸರ್ಕಾರ ಪುನರ್‌ ಪರಿಶೀಲಿಸಬೇಕು. ಒಂದೊಮ್ಮೆ ಲಾಕ್‌ಡೌನ್ ಮಾಡುವುದೇ ಅನಿವಾರ್ಯವಾದರೆ ಕಾರ್ಮಿಕರು, ರೈತರು ಸೇರಿದಂತೆ ಎಲ್ಲ ಬಗೆಯ ದುಡಿಯುವ ಜನತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಬಾರಿ ಲಾಕ್‌ಡೌನ್‌ ಘೋಷಣೆ ಮಾಡಿದ ಸಂದರ್ಭದಲ್ಲೂ ಸರ್ಕಾರ ಸೂಕ್ತ ಪ್ಯಾಕೇಜನ್ನು ಜನರಿಗೆ ತಲುಪಿಸಿಲ್ಲ. ಕಟ್ಟಡ ಕಾರ್ಮಿಕರಿಗೆ ಅವರ ನಿಧಿಯಿಂದಲೇ ನೆರವು ಕೊಟ್ಟಿದೆಯೇ ಹೊರತು ತನ್ನ ಬೊಕ್ಕಸದಿಂದ ಕೊಡಲಿಲ್ಲ. ಆ ನಿಧಿಯೂ ಕಾರ್ಮಿಕರಿಗೆ ದೊರಕಿಲ್ಲ. ಹೀಗಾಗದಂತೆ ಎಚ್ಚರ ವಹಿಸಬೇಕು’ ಎಂದರು.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *