ಬೆಂಗಳೂರು: ‘2022 ಜೆಡಿಎಸ್ನ ಸಂಘಟನಾ ವರ್ಷ’ ಎಂದು ಘೋಷಿಸಿರುವ ಜೆಡಿಎಸ್, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ‘ಜನತಾ- ಜಲಧಾರೆ’ ಯಾತ್ರೆಯನ್ನು 180 ಕ್ಷೇತ್ರಗಳಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಿದೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಜನತಾ ಜಲಧಾರೆಗೆ ಹೊರಡಲಿರುವ ಗಂಗಾ ರಥವನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಅನಾವರಣಗೊಳಿಸಿದರು.
ನಂತರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಹೆಚ್ಡಿಕೆ, ಜಲಧಾರೆ ಯಾತ್ರೆ ಮೂಲಕ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಹಾಗೂ ಇತರ ರಾಜ್ಯಗಳು ಮಾಡಿದ ಅನ್ಯಾಯ ಹಾಗೂ ಕಿರುಕುಳದ ಬಗ್ಗೆ ರಾಜ್ಯದ ಜನರಿಗೆ ತಿಳಿಸಲಾಗುವುದು ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

