ಶುಕ್ರವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಹೆದ್ದಾರಿ ಮುಚ್ಚಿರುವುದರಿಂದ ಸರಿಸುಮಾರು 3,000 ವಾಹನಗಳು ಜುಮ್ಮು-ಶ್ರೀನಗರದಲ್ಲಿ ಸಿಲುಕಿಕೊಂಡಿವೆ ಎಂದು ಸಂಚಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
,ಎಡೆಬಿಡದೆ ಕಾಡುತ್ತಿರುವ ಮಳೆಯಿಂದ ತೊಂದರೆಯಗಬಹುದು ಎಂದು ಮುನ್ನೆಚ್ಚರಿಕಾ ಕ್ರಮವಾಗಿ, ಶುಕ್ರವಾರ ಶ್ರೀನಗರದಿಂದ ಜಮ್ಮುವಿಗೆ 1,000 ಕ್ಕೂ ಹೆಚ್ಚು ವಾಹನಗಳನ್ನು ಸಾಗಿಸಲಾಯಿತು. ನಂತರ ರಾಂಬನ್ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಭೂಕುಸಿತವಾಗಿದೆ ಮತ್ತು ಬೃಹತ್ ಗಾತ್ರದ ಕಲ್ಲುಗಳು ಬಿದ್ದಿರುವುದರಿಂದ ಹೆದ್ದಾರಿಯನ್ನ ಮುಚ್ಚಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

