ಬೆಂಗಳೂರು :ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ಮುಂದಿನ ದಿನಗಳಲ್ಲಿ ವೀಕೆಂಡ್ ಕರ್ಪ್ಯೂ ವಿಸ್ತರಣೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸುಳಿವು ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಕರ್ಪ್ಯೂ ವೇಳೆ ಪೊಲೀಸರ ಕಾರ್ಯ ಶ್ಲಾಘನೀಯ, ಜನರು ಕೂಡ ಸಹಕಾರ ನೀಡಿದ್ದಾರೆ, ಮುಂದಿದ ದಿನಗಳಲ್ಲಿ ಕೂಡ ಜನತೆ ಇದೇ ರೀತಿ ಸಹಕಾರ ನೀಡಬೇಕು ಎಂದರು.
ಕೊರೊನಾ ನಿಯಂತ್ರಣಕ್ಕೆ ಕರ್ಪ್ಯೂ ವಿಧಿಸಲಾಗಿದೆ. ಮುಂದಿನ ದಿನಗಳಲ್ಲಿ ವೀಕೆಂಡ್ ಕರ್ಪ್ಯೂ ಮುಂದುವರೆಸಲು ಚಿಂತನೆ ನಡೆಸಲಾಗುವುದು. ತಜ್ಞರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

