ಬೆಂಗಳೂರು: ಮೇಕೆದಾಟು ಪಾದಯಾತ್ರೆಯೂ ರಾಜ್ಯದಲ್ಲಿ ಜೋರಾಗಿ ಸದ್ದನ್ನು ಮಾಡುತ್ತಿದೆ. ನಿನ್ನೆ ವಿಕೆಂಡ್ ಲಾಕ್ ಇದ್ದರೂ ಕೂಡಾ ಪಾದಯಾತ್ರೆಯನ್ನು ಮುಂದುವರೆಸಲಾಗಿತ್ತು. ಆದರೇ ಇದೀಗ ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ವೈದ್ಯರ ಸಲಹೆ ಮೇರೆಗೆ ಇಂದು ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಇಂದು ಅವರು ‘ನಮ್ಮ ನೀರು ನಮ್ಮ ಹಕ್ಕು’ ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ.
ರವಿವಾರ ಆರಂಭದಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ನಂತರ ಜ್ವರ ಕಾಣಿಸಿಕೊಂಡ ಕಾರಣ ಪಾದಯಾತ್ರೆ ಮೊಟಕುಗೊಳಿಸಿ ಬೆಂಗಳೂರಿಗೆ ತೆರೆಳಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

