ಶಿವಮೊಗ್ಗ: ಡಿಕೆ ಶಿವಕುಮಾರ್ ತಾನು ಚಾಂಪಿಯನ್ ಆಗಬೇಕು, ಸಿಎಂ ಅಗಬೇಕು ಎನ್ನುವ ಲೆಕ್ಕದಲ್ಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೂ ಕೋವಿಡ್ ಹೆಚ್ಚುವ ಅಧಿಕಾರವನ್ನು ಸೋನಿಯಾ ಗಾಂಧಿ ಕೊಟ್ರಾ? ಕಾಂಗ್ರೆಸ್ ನವರ ಈ ಪಾದಯಾತ್ರೆಯಿಂದ ಜನರಿಗೆ ಒಳ್ಳೆಯದಾಗುವುದಿಲ್ಲ. ನೀರು ಸಿಗಲ್ಲ ಆದರೆ ಕೋವಿಡ್ ಸಿಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಸಿಎಂ ಆಗುವ ಭ್ರಮೆಯಲ್ಲಿ ರಾಜ್ಯದ ಜನರಿಗೆ ಕೋವಿಡ್ ಹರಡುವ ಪ್ರಯತ್ನ ಒಳ್ಳೆಯದು ಮಾಡಲ್ಲ. ಮೊದಲನೆಯದಾಗಿ ನೀವು ಸಿಎಂ ಆಗುವುದೇ ಕನಸು ಎಂದು ವ್ಯಂಗ್ಯವಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

