ರಾಮನಗರ: ಪಾದಯಾತ್ರೆ ನಿಲ್ಲಿಸಲು ಸರ್ಕಾರ ದೊಡ್ಡ ಸಂಚು ರೂಪಿಸಿದೆ. ಇದರ ಭಾಗವಾಗಿ ಶಿವಕುಮಾರ್ ಗೆ ಕೋವಿಡ್ ಪಾಸಿಟಿವ್ ಮಾಡಿಸಲು ಬೇಕಂತಲೇ ಆ ಅಧಿಕಾರಿಯನ್ನು ಕಳುಹಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಪಾದಯಾತ್ರೆ ಮಾರ್ಗ ಮಧ್ಯೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ನನ್ನ ವಿರುದ್ಧ ಸಂಚು ರೂಪಿಸುತ್ತಿದ್ದು, ಕೋವಿಡ್ ಪಾಸಿಟಿವ್ ಇರುವ ಅಧಿಕಾರಿಯನ್ನು ಬೇಕಂತಲೇ ನನ್ನ ಪರೀಕ್ಷೆಗೆ ಕಳುಹಿಸಿದೆ. ಇದರ ಹಿಂದೆ ಆರೋಗ್ಯ ಹಾಗೂ ಗೃಹ ಸಚಿವರ ಕೈವಾಡ ಇದೆ ಎಂದು ದೂರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

