ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಕೈಗೊಳ್ಳಲಾಗಿದ್ದು, ಇಂದಿನಿಂದ ಜೆಡಿಎಸ್ ಭದ್ರಕೋಟೆಯಲ್ಲಿ ಪಾದಯಾತ್ರೆ ಸಾಗಲಿದೆ. ಕಾಂಗ್ರೆಸ್ ಪಾದಯಾತ್ರೆಯ ವಿರುದ್ಧ ಜೆಡಿಎಸ್ ಈಗಾಗಲೇ ಕಿಡಿಕಾರಿದೆ.
ಜೆಡಿಎಸ್ ಭದ್ರಕೋಟೆ ರಾಮನಗರಕ್ಕೆ ಎಂಟ್ರಿಕೊಟ್ಟು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೊಸ ಸಂದೇಶ ನೀಡಲಿದ್ದಾರೆ. ಮುಂದಿನ ಚುನಾವಣೆಗೆ ಸಿದ್ಧರಾಗಬೇಕೆಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಪಾದಯಾತ್ರೆಯ ವೇಳೆ ನೈತಿಕ ಬೆಂಬಲ ನೀಡಲಿದ್ದು, ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನಕ್ಕೆ ಇಂದಿನ ಪಾದಯಾತ್ರೆ ವೇದಿಕೆಯಾಗಲಿದೆ. ಅಲ್ಲದೇ, ಇವತ್ತಿನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಪಾದಯಾತ್ರೆಗೆ ಆಗಮಿಸಲಿದ್ದು, ಮತ್ತಷ್ಟು ಹುರುಪು ತರಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

