ರಾಮನಗರ: ಮೇಕೆದಾಟು ಯೋಜನೆ
ಪಾದಯಾತ್ರೆಯ ಮೂರನೇ ದಿನ ಯಶಸ್ವಿಯಾಗಿ ಮುಗಿದಿದೆ. ಸಾಕಷ್ಟು ಆರೋಪ ಮತ್ತು ಪ್ರತ್ಯಾರೋಪಗಳಿಂದ ನಡೆಯುತ್ತಿರುವ ಮೇಕೆದಾಟು ಯೋಜನೆ ರಾಜ್ಯಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಇಂದಿನ ಪಾದಯಾತ್ರೆಯಲ್ಲಿ ಕೂಡ ಡಿ.ಕೆ.ಶಿವಕುಮಾರ್ ಸಾಕಷ್ಟು ಸುಸ್ತಾಗಿದ್ದಾರೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ ಬಿಸಿಲಿನ ಜಳಕ್ಕೆ ಬಳಲಿ ಬೆಂಡಾಗಿದ್ದಿ ಶಿವಕುಮಾರ್ ಅಲ್ಲಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಾ ಹೆಜ್ಜೆ ಹಾಕಿದ್ದರು. ಇಂದು ಕೂಡ ಅವರು ಅಲ್ಪ ವಿಶ್ರಾಂತಿ ಪಡೆಯುತ್ತಾ ಹೆಜ್ಜೆ ಹಾಕಿದ್ದು ಕಾಲು ಭಾರವೇನಿಸಿ ಜೋಲಿ ಹೊಡಿಯುತ್ತಲೇ ಸಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

