Breaking News

ವಿದ್ಯಾಕಾಶಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಧಾರವಾಡ: ಕೊರೊನಾ ಹಾಗೂ ಓಮಿಕ್ರಾನ್ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವುದರಿಂದ ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮೀಣ ಕ್ಷೇತ್ರ, ಹುಬ್ಬಳ್ಳಿ ನಗರ ಮತ್ತು ಹುಬ್ಬಳ್ಳಿ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಸೇರಿದಂತೆ 1 ರಿಂದ 8ನೇ ತರಗತಿವರೆಗೆ ರಜೆ ಘೋಷಣೆ ಮಾಡಿದ್ದಾರೆ.

ನಾಳೆಯಿಂದಲೇ ಈ ಆದೇಶ ಅನ್ವಯವಾಗಲಿದ್ದು, ಮುಂದಿನ ಆದೇಶದವರೆಗೂ ಶಾಲೆಗಳನ್ನು ಪುನರಾರಂಭಿಸದಂತೆ ಸೂಚನೆ ನೀಡಲಾಗಿದೆ.

ಈ ತಾಲೂಕಿನಲ್ಲಿ ಪಾಸಿಟಿವಿಟಿ ದರ ಹೆಚ್ಚಾಗಿದ್ದು, ಹೀಗಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ ಆನ್‌ಲೈನ್ ಮೂಲಕ ತರಗತಿ ನಡೆಸಬಹುದು ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *