ಕೋವಿಡ್ ಹೆಚ್ಚುತ್ತಿರುವ ವೇಳೆಯಲ್ಲಿ ಪಾದಯಾತ್ರೆ ನಡೆಸುತ್ತಿದ್ದೀರಾ, ಪಾದಯಾತ್ರೆಗೆ ಮುನ್ನ ನೀವು ಅನುಮತಿ ಪಡೆದಿದ್ದೀರಾ ಎಂದು ಕೆಪಿಸಿಸಿ ನಾಯಕರನ್ನ ಪ್ರಶ್ನಿಸಿರುವ ವಿಭಾಗೀಯ ಪೀಠ, ಈ ಬಗ್ಗೆ ಉತ್ತರಿಸಲು ನಾಳೆವರೆಗೆ ಕಾಲಾವಕಾಶ ನೀಡಿದೆ.
ಮೇಕೆದಾಟು ಪಾದಯಾತ್ರೆ ವಿರುದ್ಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಿಸಿದ ಹೈಕೋರ್ಟ್ ನ ವಿಭಾಗೀಯ ನ್ಯಾಯಪೀಠ ರಾಜ್ಯ ಸರ್ಕಾರ ಹಾಗೂ ಕೆಪಿಸಿಸಿಯನ್ನ ತರಾಟೆಗೆ ತೆಗೆದುಕೊಂಡಿದೆ.
ಪಿಐಎಲ್ ವಿಚಾರಣೆ ವೇಳೆ ಪಾದಯಾತ್ರೆ ವಿರುದ್ಧ ಸಲ್ಲಿಕೆಯಾಗಿರುವ ದೂರುಗಳ ಬಗ್ಗೆ ಚರ್ಚೆ ನಡೆಸಿದ್ದು. ಈಗಾಗಲೇ ಪಾದಯಾತ್ರೆ ನಡೆಸುವವರ ಮೇಲೆ ಎಫ್ಐಆರ್ ದಾಖಲಾಗಿದೆ. ಇಲ್ಲಿವರೆಗು ಮೂರು ಎಫ್ಐಆರ್ ಗಳನ್ನ ದಾಖಲಿಸಿರುವುದಾಗಿ ಅಡ್ವೋಕೇಟ್ ಜನರಲ್ ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

