ರಾಮನಗರ: ‘ಮೇಕೆದಾಟು ಪಾದಯಾತ್ರೆಯು ನಾಲ್ಕು ದಿನ ಕಾಲ ಯಶಸ್ವಿಯಾಗಿ ನಡೆದಿದ್ದು, ಗುರುವಾರ ಅನಿವಾರ್ಯ ಕಾರಣಗಳಿಂದ ಇದಕ್ಕೆ ವಿರಾಮ ಹೇಳುತ್ತಿದ್ದೇವೆ. ಕೋವಿಡ್ ಅಲೆ ಮುಗಿದ ಬಳಿಕ ಇಲ್ಲಿಂದಲೇ ಪಾದಯಾತ್ರೆ ಮುಂದುವರಿಯುವುದು ಖಚಿತ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾರ್ಯಕರ್ತರಿಗೆ ಉತ್ಸಾಹ ತುಂಬಿದರು.
ಗುರುವಾರ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವುದಾಗಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ ಬಳಿಕ ಕಾಂಗ್ರೆಸ್ ಕಚೇರಿಯಿಂದ ಸಿದ್ದರಾಮಯ್ಯ ಜೊತೆಗೂಡಿ ಹೊರಬಂದ ಅವರು ನೆರೆದ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

