Breaking News

ಜ.26ರಂದು ಜಿಲ್ಲಾಮಟ್ಟದ ಕಚೇರಿಗಳ ಸಂಕೀರ್ಣ ಉದ್ಘಾಟನೆ

ಹೊಸಪೇಟೆ(ವಿಜಯನಗರ): ‘ಗಣರಾಜ್ಯೋತ್ಸವದ ದಿನ ಜಿಲ್ಲಾಮಟ್ಟದ ಕಚೇರಿಗಳ ಸಂಕೀರ್ಣ ಉದ್ಘಾಟನೆ ಹಾಗೂ ಗುಂಡಾ ಸಸ್ಯ ಉದ್ಯಾನದಲ್ಲಿ ₹32 ಲಕ್ಷದಲ್ಲಿ ಅಭಿವೃದ್ಧಿಪಡಿಸಲಾಗಿರುವ ‘ಅಕ್ವೇರಿಯಂ’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಉದ್ಘಾಟಿಸುವರು.ಬೆಳಿಗ್ಗೆ 9ಕ್ಕೆ ನಗರದ ಕ್ರೀಡಾಂಗಣದಲ್ಲಿ ಸಚಿವರು ತ್ರಿವರ್ಣ ಧ್ವಜಾರೋಹಣ ನೆರವೇರಿಸುವರು. ಬಳಿಕ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸುವರು
ಎಂದು ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ತಿಳಿಸಿದರು.

ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರನ್ನು ಸನ್ಮಾನಿಸುವರು. ಕಾರ್ಯಕ್ರಮದ ನಂತರ ಸಚಿವರು ಕಚೇರಿ ಸಂಕೀರ್ಣ, ಅಕ್ವೇರಿಯಂ ಉದ್ಘಾಟಿಸುವರು ಎಂದು ಹೇಳಿದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *