Breaking News

ಲಕಮಾಪುರದಲ್ಲಿ ಬಣವೆಗಳಿಗೆ ಬೆಂಕಿ

ಧಾರವಾಡ: ತಾಲೂಕಿನ ಲಕಮಾಪುರ ಗ್ರಾಮದಲ್ಲಿ ಎರಡು ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಮೇವು ಸುಟ್ಟ ಕರಕಲಾದ ಘಟನೆ ಇಂದು ಬೆಳಗಿನಜಾವ ನಡೆದಿದೆ.

ಲಕಮಾಪುರ ಗ್ರಾಮದ ಅಶೋಕ ಹುಡೇದ ಎಂಬುವವರಿಗೆ ಸೇರಿದ ಒಂದು ಕಣಕಿ ಬಣವಿ ಹಾಗೂ ಒಂದು ಹೊಟ್ಟಿನ ಬಣವಿ ಬೆಂಕಿಗೆ ಆಹುತಿಯಾಗಿವೆ. ಇದರಿಂದ ಅಂದಾಜು 2 ಲಕ್ಷ ರೂಪಾಯಿ ಮೌಲ್ಯದ ಮೇವು ಸುಟ್ಟು ಕರಕಲಾಗಿದೆ ಎಂದು ಅಂದಾಜಿಸಲಾಗಿದೆ.

ಈ ಹಿಂದೆಯೂ ಕಿಡಿಗೇಡಿಗಳು ಇದೇ ರೀತಿ ಅಶೋಕ ಅವರಿಗೆ ಸೇರಿದ್ದ ಬಣವೆಗಳಿಗೆ ಬೆಂಕಿ ಇಟ್ಟಿದ್ದರು. ಈ ಬಾರಿಯೂ ಉದ್ದೇಶಪೂರ್ವಕವಾಗಿಯೇ ಬಣವೆಗಳಿಗೆ ಬೆಂಕಿ ಹಚ್ಚಿರಬಹುದು ಎಂದು ಅಶೋಕ ಅವರು ಸಂಶಯ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *