Breaking News

ಸುಮ್ಮನೆ ಜಗಳಕ್ಕೆ ಬಂದ್ರೆ ತಮಿಳು ಸಿನಿಮಾ ಬ್ಯಾನ್ : ವಾಟಾಳ್ ನಾಗರಾಜ್



ಬೆಂಗಳೂರು: ನೀವೇನಾದ್ರೂ ಮತ್ತೆ ಕಾಲು ಕೆರೆದುಕೊಂಡು ಜಗಳಕ್ಕೆ ಬಂದರೆ, ಇಡೀ ಕರ್ನಾಟಕದ ಉದ್ದಗಲಕ್ಕೂ ತಮಿಳುನಾಡು ಗಡಿ ಬಂದ್​ ಮಾಡು ತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಬೆಂಗಳೂರು ಹೊರ ವಲಯದ ಆನೇಕಲ್ ನಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವ ರು, ಬರೀ ಪಾದಯಾತ್ರೆ ಮಾಡಿದ್ರೆ ಸಾಧ್ಯವಿಲ್ಲ.ತಮಿಳುನಾಡಿಗೆ ಅಂತಿಮವಾಗಿ ಎಚ್ಚರಿಕೆ ಕೊಡುತ್ತೇನೆ.

ಕಾಲು ಕೆರೆದು ಕೊಂಡು ಬಂದರೆ ತಮಿಳು ಸಿನಿಮಾ ಬ್ಯಾನ್ ಮಾಡುತ್ತೇವೆ. ಒಂದು ವಾಹನವನ್ನೂ ಒಳಗಡೆ ಬಿಡೋದಿಲ್ಲ. ತಮಿಳು ಚಿತ್ರಗಳನ್ನು ಬಂದ್​ ಮಾಡುತ್ತೇವೆ. ನಿಮ್ಮ ವಿರುದ್ಧ ಇಲ್ಲಿ ಸತ್ಯಾಗ್ರ ಹದ ಮೂಲಕ ಗಡಿನಾಡು ಚಳುವಳಿಯನ್ನು ಮಾಡುತ್ತಿದ್ದೇವೆ’ ಎಂದು ವಾಟಾಳ್​ ನಾಗರಾಜ್​ ಹೇಳಿದ್ದಾರೆ.

Share News

About admin

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *