ರಾಮನಗರ: ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಸ್. ಗಿರೀಶ್ ಅವರನ್ನು ಬುಧವಾರ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಮತ್ತೊಬ್ಬ ಐಪಿಎಸ್ ಅಧಿಕಾರಿ ಸಂತೋಷ್ ಬಾಬು ಅವರನ್ನು ನೇಮಿಸಿದೆ.ಸಂತೋಷ್ ಮೂಲತಃ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನವರೇ ಆಗಿರುವುದು ವಿಶೇಷ.
ಗಿರೀಶ್ ಬೆಂಗಳೂರಿನ ವೈಟ್ಫೀಲ್ಡ್ ವಿಭಾಗದ ಡಿಸಿಪಿಯಾಗಿ ತೆರಳಲಿದ್ದು, ಬೆಂಗಳೂರಿನಲ್ಲಿ ಗುಪ್ತಚರ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ್ ರಾಮನಗರ ಎಸ್ಪಿಯಾಗಿ ಬರಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

