ಶಿವಮೊಗ್ಗ: ಕೋವಿಡ್ ಕಾರಣ ಮಾರ್ಚ್ 22ಕ್ಕೆ ಮುಂದೂಡಲಾಗಿದೆ. ಫೆ. 22ರಿಂದ ಆರಂಭವಾಗಬೇಕಿದ್ದ ಶಿವಮೊಗ್ಗ ಮಾರಿಕಾಂಬ ಜಾತ್ರೆ ಸ್ಥಗಿತಗೊಳಿಸಿ ಮಾರ್ಚ್ ನಲ್ಲಿ ಮಾಡುವುದಾಗಿ
ಹೇಳಲಾಗಿದೆ.
ಜಾತ್ರೆ ಮುಂದೂಡಿದರೂ ಸಿದ್ಧತೆಗಳು ಮುಂದುವರಿಯಲಿವೆ. ಕೋವಿಡ್ ನಿಯಮಗಳು, ಮಾರ್ಗಸೂಚಿ ಅನುಸರಿಸಿ ಮಾರಿಕಾಂಬ ಜಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಕೋಟೆ ಶ್ರೀಮಾರಿಕಾಂಬ ಸಮಿತಿ ಅಧ್ಯಕ್ಷ ಎಸ್.ಕೆ. ಮರಿಯಪ್ಪ, ಕಾರ್ಯದರ್ಶಿ ಎನ್. ಮಂಜುನಾಥ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.