ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ರಾಕ್ಷಸರಿಗೆ ಹೋಲಿಸುವ ಮೂಲಕ ಪರೋಕ್ಷವಾಗಿ ಟಾಂಗ್ ನೀಡಿದರು. ತಾಲೂಕಿನ ಮಾವಿನಕಟ್ಟಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗುದ್ದಲಿ ಪೂಜೆ ನೆರವೇರಿಸಿದರು ಈ ರೀತಿ ಮಾತನಾಡಿದರು.
ಗುದ್ದಲಿ ಪೂಜೆ ಬಳಿಕ ಮಾತನಾಡಿದ ಅವರು, ನಾಲ್ಕೂವರೆ ಕೋಟಿ ರೂಪಾಯಿಯ ಪ್ಯಾಕೇಜ್ ಇದು. ಎರಡು ವರ್ಷಗಳ ಹಿಂದೆಯೇ ನಾಲ್ಕೂವರೆ ಕೋಟಿ ರೂಪಾಯಿ ಟೆಂಡರ್ ಆಗಿ ವರ್ಕ್ ಆರ್ಡರ್ ಆಗಿತ್ತು. ಆದರೆ ದುರ್ದೈವದಿಂದ ನಮ್ಮ ಸರ್ಕಾರ ಪತನವಾಯಿತು. ಬಳಿಕ ರಮೇಶ್ ಜಾರಕಿಹೊಳಿ ನೀರಾವರಿ ಸಚಿವರಾದರು. ರಮೇಶ್ ಜಾರಕಿಹೊಳಿ ನೀರಾವರಿ ಸಚಿವರಾದ ಆದ ತಕ್ಷಣವೇ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಮಂಜೂರಾದ ಎಲ್ಲ ಅನುದಾನವನ್ನು ತಡೆಹಿಡಿದರು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

