ಧಾರವಾಡ: ಕೋವಿಡ್-19 3ನೇ ಅಲೆ ಆರಂಭವಾಗಿದ್ದು, ಸೋಂಕಿನ ತೀವ್ರತೆ ಕಡಿಮೆ ಇರುವುದರಿಂದ 94% ರಿಂದ 95% ಜನ ಸೋಂಕಿತರು ಹೋಮ್ ಐಸೋಲೇಷನ್ ಆಗುತ್ತಿದ್ದಾರೆ.
ಹೋಮ್ ಐಸೋಲೇಷನ್ದಲ್ಲಿರುವ ಸೋಂಕಿತರು ಮಾರ್ಗಸೂಚಿಗಳ ಪಾಲನೆಯೊಂದಿಗೆ ಆರೋಗ್ಯವಂತರಾಗಿ, ರೋಗದಿಂದ ಗುಣಮುಖರಾಗಲು ಧಾರವಾಡ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಹೊಸ ಉಪಾಯ ಹುಡುಕಿ, ಅನುಷ್ಠಾನಗೊಳಿಸಿವೆ.
ಅದುವೇ ‘ಸೋಂಕಿತರ ಮನೆ ಬಾಗಿಲಿಗೆ ಔಷಧಿ ಕಿಟ್’ ವಿತರಣೆ. ಕಳೆದ ಮೂರ್ನಾಲ್ಕು ದಿನಗಳಿಂದ ಇದು ಉತ್ತಮ ರೀತಿಯಿಂದ ಅನುಷ್ಠಾನವಾಗುತ್ತಿದೆ.