Breaking News

ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಹೆಚ್ ಡಿಕೆ


ಬೆಂಗಳೂರು: ಬಿಜೆಪಿಯ ಬಾಲಂಗೋಚಿ ಎಂದು ಜರಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ.

‘ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ. ನೀವು ಜೆಡಿಎಸ್‌ ಬಗ್ಗೆ ಮಾತನಾಡುತ್ತೀರಾ’ ಎಂದು ಹೆಚ್​ಡಿಕೆ ಪ್ರಶ್ನಿಸಿದ್ದಾರೆ.

ತುಮಕೂರಿನಿಂದ ಜೆಡಿಎಸ್‌ ಅನ್ನು ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್​ನ ಪಿತ್ರಾರ್ಜಿತ ಆಸ್ತಿಯಾ? ಚಾಮುಂಡೇಶ್ವರಿ ಕ್ಷೇತ್ರದಿಂದ ನಿಮ್ಮನ್ನು ಜನರು ಓಡಿಸಿದ್ದು ಮರೆತುಬಿಟ್ಟಿರಾ? ಈ ಸಲ ಬಾದಾಮಿ ಕ್ಷೇತ್ರದಿಂದಲೂ ಓಡಬೇಕಾಗುತ್ತದೆ, ಕಾಯಿರಿ ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
ಹೀಗಾಗಿ ಸರಣಿ ಟ್ವೀಟ್​ ಮಾಡಿ ಕಿಡಿಕಾರಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *