Breaking News

ಪತ್ರಕರ್ತ ಎಸ್​​.ಎಸ್​ ಗಂಗಾಧರ ಮೂರ್ತಿ ನಿಧನ


ಬೆಂಗಳೂರು: ನಗರದ ಟೌನ್​​ಹಾಲ್​​ ಮುಂಭಾಗ ನಡೆದ ಭೀಕರ ಲಾರಿ ಅಪಘಾತದಲ್ಲಿ ವಿಜಯವಾಣಿಯ ಮುಖ್ಯ ಉಪ ಸಂಪಾದಕರಾದ ಎಸ್​​.ಎಸ್​ ಗಂಗಾಧರ ಮೂರ್ತಿಯವರು (49) ನಿಧನರಾಗಿದ್ದಾರೆ. ಮೃತರು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇಂದು ಮಧ್ಯಾಹ್ನ ಎಸ್​​.ಎಸ್​ ಗಂಗಾಧರ ಮೂರ್ತಿಯವರು ಬೈಕ್​​ನಲ್ಲಿ ಚಾಮರಾಜಪೇಟೆಯಲ್ಲಿರುವ ವಿಜಯವಾಣಿ ಕಚೇರಿಗೆ ಬರುತ್ತಿದ್ದಾಗ, ಟೌನ್ ಹಾಲ್ ಬಳಿ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ಡಿಕ್ಕಿ ಹೊಡೆದು ಬಿದ್ದಿದೆ.


ಈಗ ಲಾರಿ ಅಡಿಯಲ್ಲಿ ಸಿಲುಕಿದ ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗದೆ ಕೊನೆಯುಸಿರೆಳೆದರು.

Share News

About admin

Check Also

ಯೋಗೇಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು!

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಬಿಗ್ …

Leave a Reply

Your email address will not be published. Required fields are marked *