Breaking News

ಬೆಳಗಾವಿ ಬಿಜೆಪಿ ಸಭೆ ಕುರಿತು ಅಸಮಧಾನ ಹೊರ ಹಾಕಿದ ರಮೇಶ ಜಾರಕಿಹೊಳಿ

ಬೆಂಗಳೂರು : ಅರಣ್ಯ ಸಚಿವ ಉಮೇಶ ಕತ್ತಿ ಮನೆಯಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಬಿಜೆಪಿ ಪ್ರಮುಖ ಮುಖಂಡರ ರಹಸ್ಯ ಸಭೆ ಬಗ್ಗೆ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಅವರು ಸೋಮವಾರ ಪ್ರತಿಕ್ರಿಯೆ ನೀಡಿದ್ದು, ನಾನು ಅಂತಹ ಸಭೆಗೆ ಹೋಗುವುದಿಲ್ಲ,ಪ್ರೀತಿ ಇರುವ ಸಭೆಗೆ ಮಾತ್ರ ಹೋಗುತ್ತೇನೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಹೈಕಮಾಂಡ್ ಬಹಳ ಬುದ್ದಿವಂತ ಇದೆ.ಯಾರು ಎನ್ ಮಾಡ್ತಾರೆ ಅವರಿಗೆ ಗೊತ್ತಿದೆ.ಆವತ್ತಿನ ಸಭೆಗೆ ಕುಮಟಳ್ಳಿಗೆ ಆಹ್ವಾನ‌ ಇತ್ತು.ಅವರು ಬೆಂಗಳೂರಿನ ಲ್ಲಿ ಇದ್ದರು.ಹಾಗಾಗಿ ಹೋಗಿರಲಿಲ್ಲ ಎಂದರು.

ಸಂಪುಟ ಪುನಾರಚನೆ ಬಗ್ಗೆ ಸಿಎಂ ನಿರ್ಧಾರ ಒಪ್ಪುತ್ತೇವೆ. ಜಾರಕಿಹೊಳಿ ಬ್ರದರ್ಸ್ ಬಿಟ್ಟು ಸಭೆ ಮಾಡಿದ ವಿಚಾರ ಮಾಧ್ಯಮದ ಮೂಲಕ ಸಭೆಮಾಹಿತಿ ಬಂದಿದೆ.ಅಲ್ಲಿ ಎನು ನಡೆದಿದೆ ಅಂತ ಗೊತ್ತಿಲ್ಲದೇ ಮಾತಾಡೋದು ಸರಿಯಲ್ಲ.ಅವರು ಪಕ್ಷದ ಸಂಘಟನೆ, ಪಕ್ಷಕ್ಕೆ ಒಳ್ಳೆಯದಾಗಲಿ ಅಂತ ಸೇರಿದ್ದರೆ? ಅವರು ಹಿರಿಯರಿದ್ದಾರೆ.ನಮ್ಮ ವರಿಷ್ಠ ರು ಬಹಳ ಬುದ್ಧಿವಂತರಿದ್ದಾರೆ.ಊಹೆ ಮೇಲೆ ನಾನು ಮಾತಾಡೋದು ತಪ್ಪಲ್ಲವೇ ಎಂದರು.

Share News

About admin

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *