ಬಾದಾಮಿ: ಬಿಜೆಪಿ, ಜೆಡಿಎಸ್ ನ ಶಾಸಕರು ನಮ್ಮ ಸಂಪರ್ಕದಲ್ಲಿರುವುದು ನಿಜ. ಆದರೆ ಎಷ್ಟು ಜನ ಇದ್ದಾರೆ, ಯಾರ್ಯಾರು ಇದ್ದಾರೆ ಎಂದು ನಾನು ಹೆಸರು ಹೇಳಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಇದೇ ವೇಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಹೆಚ್ ಡಿ ಕೆಗೆ ಯಾವಾಗ ಕೋಪ ಬರುತ್ತೋ ಯಾವಾಗ ಬಿಡುತ್ತೋ ಗೊತ್ತಿಲ್ಲ, ನನಗಂತು ಕೋಪ ಬರಲ್ಲ. ಪ್ರಜಾಪ್ರಭುತ್ವದಲ್ಲಿ ಟೀಕೆಗಳನ್ನು ಸಹಿಸಿಕೊಳ್ಳುವ ಶಕ್ತಿ ಇರಬೇಕು. ಸಹಿಸಿಕೊಳ್ಳುವವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುತ್ತೆ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

