ಬೆಂಗಳೂರು : ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಪ್ರಭಾವದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ನಿನ್ನೆ ಒಂದೇ ದಿನ 50 ಸಾವಿರ ಹೊಸ ಪ್ರಕರಣ ಪತ್ತೆಯಾಗಿವೆ. ಇತ್ತ ಸೋಂಕಿತರ ಸಂಖ್ಯೆ ಇನ್ನಷ್ಟು ಉತ್ತುಂಗಕ್ಕೇರುವ ಸಾಧ್ಯತೆ ಬಗ್ಗೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಆದರೆ, ಈ ಕೋವಿಡ್ ಮೂರನೇ ಅಲೆಯು ಜ್ವರ, ಕೆಮ್ಮು, ನೆಗಡಿಗಷ್ಟೇ ಸೀಮಿತವಾಗುತ್ತಾ? ಇಂತಹದೊಂದು ಪ್ರಶ್ನೆ ಸಹಜವಾಗಿ ಕಾಡುತ್ತೆ. ಯಾಕೆಂದರೆ, 50,000 ಕೇಸ್ ಬಂದ್ರೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗುತ್ತಿಲ್ಲ. ಹೀಗಾಗಿ, ಆತಂಕ ಪಡುವ ಅಗತ್ಯವಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

