Breaking News

ಮಾಜಿ ಸಿಎಂ ವಿರುದ್ಧ ಹೊಸ ಬಾಂಬ್ ಸಿಡಿಸಿದ ರಮೇಶ ಜಾರಕಿಹೊಳಿ

ಬೆಂಗಳೂರು : ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ . ಸಿದ್ದರಾಮಯ್ಯ ಅವರು ಯಾರನ್ನೂ ವಾಪಸ್ ತೆಗೆದುಕೊಳ್ಳುವುದಿಲ್ಲ ಅಂತ ಅಧಿವೇಶನದಲ್ಲಿ ಹೇಳಿದ್ದರು. ಈಗ ಯಾಕೆ ನಮ್ಮವರು ಬೇಕು ಅಂತಾರೆ  ಎಂದು ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ
ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಬಿಡುವಾಗ 36 ಜನ ನನ್ನ ಜೊತೆ ಇದ್ದರು.ಅದರಲ್ಲಿ 17 ಜನ ಮಾತ್ರ ಬಿಜೆಪಿಗೆ ಬಂದೆವು.ಉಳಿದವರೂ ನಮ್ಮ ಜೊತೆ ಇದ್ದಾರೆ ಎಂದು ಹೇಳಿದ್ದಾರೆ.

ದಯವಿಟ್ಟು ಸಿದ್ದರಾಮಯ್ಯ ಹಾಗೆಲ್ಲ ಮಾತಾಡಬಾರದು. 19 ಜನ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಅದರಲ್ಲಿ 3 ಮಂದಿ ಜೆಡಿಎಸ್ ಅವರು. ಅವರನ್ನ ನಾವು ಮುಟ್ಟುವುದಿಲ್ಲ.16 ಮಂದಿ ಕಾಂಗ್ರೆಸ್ ಶಾಸಕರು ನನ್ನ ಜೊತೆ ಇದ್ದಾರೆ. ಹಿಂದೆ ಹೇಳಿದ್ದ ಜಿಲ್ಲೆಯ ಕಾಂಗ್ರೆಸ್ ಶಾಸಕರು ನಮ್ಮ ಜೊತೆ ಇದ್ದಾರೆ.ಅದರಲ್ಲಿ ನಮ್ಮ ಜಿಲ್ಲೆ ಇಬ್ಬರು ಇದ್ದಾರೆ.ಮೂರನೇ ಅವರು ಬರುವವರು ಇದ್ದಾರೆ. ಅವರನ್ನು ನಾನು ತೆಗೆದುಕೊಳ್ಳುವುದಿಲ್ಲ. ಅವರು ಬಿಜೆಪಿಗೆ ಬಂದರೆ ನಾನು ಬೇರೆ ಕಡೆ ಹೋಗುತ್ತೇನೆ ಎಂದು ಸಿದ್ದರಾಮಯ್ಯ ಅವರಿಗೆ ನೇರವಾಗಿ ಮತ್ತು ಪರೋಕ್ಷವಾಗಿ ಬಿಜೆಪಿಗೆ ಸವಾಲು ಹಾಕಿದರು.


Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *