ಮಂಗಳೂರು: ‘ಬಂಟ್ವಾಳ ತಾಲ್ಲೂಕಿನ ಅಡ್ಯನಡ್ಕ ಸಮೀಪದ ಅಮೈ ಮಹಾಲಿಂಗ ನಾಯ್ಕ (76 ವರ್ಷ) ಕರಾವಳಿ ಭಾಗದ ಭಗೀರಥ’ ಎಂದೇ ಖ್ಯಾತಿ ಗಳಿಸಿರುವ ಅವರು ಕೃಷಿ ಕ್ಷೇತ್ರದ ಸಾಧನೆಗಾಗಿ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಬಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು, ಇದೇ ವ್ಯವಸ್ಥೆಯಲ್ಲಿ ವಿದ್ಯುತ್ ರಹಿತವಾಗಿ ಗುರುತ್ವಾಕರ್ಷಣೆಯ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಹನಿ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿರುವ ಅವರು, ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದು ‘ಆಧುನಿಕ ಭಗೀರಥ’ ಎನಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

