ಬಾಗಲಕೋಟೆ: ರಾಜ್ಯ ರಾಜಕಾರಣದಲ್ಲಿ ಮತ್ತೆ ಪಕ್ಷಾಂತರದ ಗುಲ್ಲು ಎದ್ದಿರುವಾಗ ನಾಯಕರ ನಡುವೆ ವಾಕ್ ಸಮರಕ್ಕೂ ವೇದಿಕೆ ಸಿಕ್ಕಿದೆ. ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಸಿ.ಸಿ. ಪಾಟೀಲ್ ಟಾಂಗ್ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಸಿಸಿ ಪಾಟೀಲ್ ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗದ ಉತ್ತರ ನೀಡಿದರು.
ಯಾವ ಕಾರಣಕ್ಕೂ ಅವರನ್ನ ವಾಪಸ್ ತಗೊಳೋದಿಲ್ಲ ಅಂತ ಹೇಳಿದ್ದು ಯಾರು..? ಬಿಟ್ಟು ಹೋದವರನ್ನ ವಾಪಸ್ ತಗೊಳೋದಿಲ್ಲ ಅಂತ ಗುದ್ದಿ ಹೇಳಿದವರು ಯಾರು? ಬಿಟ್ಟು ಹೋದವನ್ನ ಯಾವ ಕಾಲಕ್ಕೂ ವಾಪಸ್ ತಗೋಳೋದಿಲ್ಲ ಅಂತ ಇದೇ ಸಿದ್ದರಾಮಯ್ಯ ಹೇಳಿದ್ದರು. ಇನ್ನೂ ಒಂದು ವರ್ಷ ಆಗಿಲ್ಲ, ಈಗ ಹೀಗೆ ಹೇಳ್ತಾರೆ ಅಂದ್ರೆ ಅವರ ಅನಿವಾರ್ಯತೆ ಎಷ್ಟಿದೆ ಅವರ ಅಭದ್ರತೆ ಎಷ್ಟಿದೆ ಅಂತ ನೀವೇ ವಿಚಾರ ಮಾಡಿ. ವಾಪಸ್ ಹೋಗೋ ಬಗ್ಗೆ ನನಗೇನೂ ಸಂಶಯ ಇಲ್ಲಪ್ಪ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

